TSK

TSK · ಆಮೋಸ 6:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ನಿನ್ನ ಸಂತಾನವನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕದೆ, ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಣೀರಿಗೂ ಮತ್ತು ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹಾರವಾಗುವರು.

ಇವರು ಯೆಹೂದ್ಯರನ್ನು ದ್ವೇಷಿಸುತ್ತಿದ್ದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಮಕ್ಕಳು. ಇಷ್ಟು ಜನರನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.

ಅರಣ್ಯದ ಕಡೆಯಿಂದ ಬಿರುಗಾಳಿಯು ಬೀಸಿ ಮನೆಯ ನಾಲ್ಕು ಮೂಲೆಗಳಿಗೆ ಬಡಿದು, ಮನೆಯು ಯೌವನಸ್ಥರ ಮೇಲೆ ಬಿದ್ದಿತು. ಅವರೆಲ್ಲರು ಸತ್ತು ಹೋದರು. ಇದನ್ನು ತಿಳಿಸುತ್ತಿರುವ ನಾನೊಬ್ಬನೇ ತಪ್ಪಿಸಿಕೊಂಡು ಉಳಿದಿದ್ದೇನೆ” ಎಂದನು.

ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಒಂದು ಪಟ್ಟಣದಿಂದ ಯುದ್ಧಕ್ಕೆ ಹೊರಟ ಸಾವಿರ ಸೈನಿಕರಲ್ಲಿ ನೂರು ಮಂದಿ ಉಳಿಯುವರು, ಒಂದು ಊರಿನಿಂದ ಹೊರಟ ನೂರು ಸೈನಿಕರಲ್ಲಿ ಇಸ್ರಾಯೇಲರ ವಂಶಕ್ಕೆ ಹತ್ತು ಜನ ನಿಲ್ಲುವರು.”