1 ಸಮುವೇಲನು 28:6
TSK
ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
TSK
Treasury of Scripture Knowledge references in ಕನ್ನಡ IRV.
ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.
ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು.
ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.
ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.