ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
TSK
TSK · ಆಮೋಸ 8:14
Treasury of Scripture Knowledge references in ಕನ್ನಡ IRV.
ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.
ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.
ಅನಂತರ ಶೆಮೆರ್ ಎಂಬವನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
ಅವರ ಮೇಲೆ ಕೆಂಡಗಳು ಸುರಿಯಲಿ, ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ.
ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
ಇಸ್ರಾಯೇಲೇ, ನೀನು ವ್ಯಭಿಚಾರಿಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಸೇರಬೇಡಿರಿ, ಬೇತ್ ಅವೆನಿಗೆ ಯಾತ್ರೆ ಹೋಗಬೇಡಿರಿ, “ಯೆಹೋವನ ಜೀವದಾಣೆ” ಎಂದು ಶಪಥ ಮಾಡಬಾರದು.
ಸಮಾರ್ಯದ ನಿವಾಸಿಗಳು ಬೇತಾವೆನಿನ ಬಸವನ ವಿಷಯದಲ್ಲಿ ಭಯಪಡುವರು. ಅದರ ಭಕ್ತ ಜನರು ಅದಕ್ಕಾಗಿ ಎದೆಬಡಿದುಕೊಳ್ಳುವರು; ಅದರ ಮಹಿಮೆಯು ನಂದಿಹೋಯಿತು ಎಂದು ಪೂಜಾರಿಗಳು ಅದಕ್ಕಾಗಿ ನಡುಗುವರು.
ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದುದರಿಂದ ತನ್ನ ದೋಷಫಲವನ್ನು ಅನುಭವಿಸಲೇ ಬೇಕು; ಅದರ ಜನರು ಖಡ್ಗದಿಂದ ಹತರಾಗುವರು; ವೈರಿಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.
ಇಸ್ರಾಯೇಲೆಂಬ ಯುವತಿಯು ಬಿದ್ದಿದ್ದಾಳೆ; ಮತ್ತೆ ಏಳುವುದೇ ಇಲ್ಲ; ದಿಕ್ಕಿಲ್ಲದೆ ತನ್ನ ನೆಲದ ಮೇಲೆ ಒರಗಿದ್ದಾಳೆ; ಅವಳನ್ನು ಎತ್ತಲು ಯಾರೂ ಇಲ್ಲ.
ಇದಕ್ಕೆಲ್ಲಾ ಕಾರಣ ಯಾಕೋಬಿನ ದ್ರೋಹ ಮತ್ತು ಇಸ್ರಾಯೇಲ್ ವಂಶದ ಪಾಪಗಳೇ. ಯಾಕೋಬಿನ ದ್ರೋಹವೇನು? ಸಮಾರ್ಯವಲ್ಲವೇ! ಯೆಹೂದದ ಕೆಟ್ಟ ಪೂಜಾಸ್ಥಾನಗಳು ಯಾವುವು? ಯೆರೂಸಲೇಮಲ್ಲವೇ!
ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.
ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.