¶ ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
TSK
TSK · ಆಮೋಸ 8:2
Treasury of Scripture Knowledge references in ಕನ್ನಡ IRV.
¶ ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.
¶ ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
¶ ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
¶ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.
ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿಮಾಡಿಕೊಂಡಿರುವುದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರ ಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು; ಹೌದು, ನಮಗೆ ಅಂತ್ಯವು ಬಂದೇ ಬಂತು.
ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.
ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
¶ ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.
ಅವರಿಗೆ ಹೀಗೆ ಹೇಳು, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ನಾನು ಈ ಗಾದೆಯನ್ನು ಬಳಸುವುದನ್ನು ನಿಲ್ಲಿಸಿಬಿಡುವೆನು, ಅದು ಇಸ್ರಾಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಈ ಮಾತನ್ನು ಕೇಳಿರಿ, ‘ಕ್ಲುಪ್ತಕಾಲವು ಸಮೀಪಿಸಿದೆ, ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.
ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.
ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.
¶ ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.