ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
TSK
TSK · ಆಮೋಸ 8:3
Treasury of Scripture Knowledge references in ಕನ್ನಡ IRV.
¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.
ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.
¶ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.
ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
ಒಂದು ಮನೆಯಲ್ಲಿ ಹತ್ತು ಜನ ಉಳಿದರೂ ಅವರೆಲ್ಲರೂ ಸಾಯುವರು.
ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.
ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.