ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
TSK
TSK · ಆಮೋಸ 8:4
Treasury of Scripture Knowledge references in ಕನ್ನಡ IRV.
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.
ಖಡ್ಗದಂತಿರುವ ಹಲ್ಲುಗಳೂ ಕತ್ತಿಯಂತಿರುವ ಕೋರೆಗಳೂ ಉಳ್ಳವರಾಗಿ ಭೂಮಿಯೊಳಗಿಂದ ಬಡವರನ್ನೂ, ಮನುಷ್ಯರ ಮಧ್ಯದೊಳಗಿಂದ ದಿಕ್ಕಿಲ್ಲದವರನ್ನೂ, ಅಗೆದು ನುಂಗಿಬಿಡುವ ಮತ್ತೊಂದು ತರದವರು ಉಂಟು.
ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,
ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.
ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.
¶ “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,
¶ ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು.
ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.