ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
TSK
TSK · ಆಮೋಸ 8:5
Treasury of Scripture Knowledge references in ಕನ್ನಡ IRV.
¶ “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.
ನಿಮ್ಮ ತೂಕದ ಕಲ್ಲೂ ಮತ್ತು ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
¶ ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.
ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.
ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.
ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
ನಿಮ್ಮ ತಕ್ಕಡಿಯೂ, ಧಾನ್ಯದ ಅಳತೆಯೂ, ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.
ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?
ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
¶ ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.