ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.
TSK
TSK · ಆಮೋಸ 8:7
Treasury of Scripture Knowledge references in ಕನ್ನಡ IRV.
ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.
ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.
ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
ಹೀಗಿರಲು, ಸೇನಾಧೀಶ್ವರನಾದ ಯೆಹೋವನು ನನ್ನ ಕಿವಿಗಳಲ್ಲಿ ಪ್ರಕಟಿಸಿದ್ದೇನೆಂದರೆ, “ನೀವು ಸಾಯುವ ತನಕ ಈ ಅಧರ್ಮಕ್ಕೆ ಪ್ರಾಯಶ್ಚಿತ್ತವು ಇಲ್ಲವೇ ಇಲ್ಲ ಎಂದು ಸೇನಾಧೀಶ್ವರನಾಗಿರುವ ಯೆಹೋವನೆಂಬ ಕರ್ತನಾದ ನಾನು ನುಡಿದಿದ್ದೇನೆ” ಎಂಬುದೇ.
ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
“ನೀವು, ನಿಮ್ಮ ಪೂರ್ವಿಕರು, ನಿಮ್ಮ ಅರಸರು, ನಿಮ್ಮ ಪ್ರಧಾನರು, ಸಾಮಾನ್ಯ ಜನರು, ನೀವೆಲ್ಲರೂ ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ಹಾಕಿದ ಧೂಪವು ಯೆಹೋವನ ನೆನಪಿನಲ್ಲಿ ಇಲ್ಲವೋ, ಅದು ಆತನ ಜ್ಞಾಪಕಕ್ಕೆ ಬರಲಿಲ್ಲವೋ?
ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”