TSK

TSK · ಆಮೋಸ 9:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.

ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ!

¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.

ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ; ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು.

ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.

ಅಯ್ಯೋ! ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ, ಪ್ರಮುಖ ಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲರ ನ್ಯಾಯವಿಚಾರಕರಾಗಿ, ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ, ಗತಿಯನ್ನು ಏನೆಂದು ಹೇಳಲಿ!

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

¶ “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.

ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

‹ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.›