ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.
TSK
TSK · ಕೊಲೊಸ್ಸೆಯವರಿಗೆ 2:8
Treasury of Scripture Knowledge references in ಕನ್ನಡ IRV.
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
‹ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.›
ಯೇಸು ಅವರಿಗೆ ‹“ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ›‹ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ”› ಎಂದು ಹೇಳಿದನು.
ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.
ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
¶ “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
¶ “ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.
ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.
ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?
ನೀವಾದರೋ ಕ್ರಿಸ್ತನ ಬೋಧನೆಯನ್ನು ಅಂಥದೆಂದು ಕಲಿತುಕೊಳ್ಳಲಿಲ್ಲ.
ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.
¶ ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
¶ ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.
ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.
ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.