ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
TSK
TSK · ಕೊಲೊಸ್ಸೆಯವರಿಗೆ 3:8
Treasury of Scripture Knowledge references in ಕನ್ನಡ IRV.
ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ›‹ಅಗ್ನಿ ನರಕಕ್ಕೆ ಗುರಿಯಾಗುವನು.›
ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.
ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
¶ ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?
ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.
ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.
ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.