¶ ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.
TSK
TSK · ಕೊಲೊಸ್ಸೆಯವರಿಗೆ 4:6
Treasury of Scripture Knowledge references in ಕನ್ನಡ IRV.
ಆಗ ಎಲೀಷನು ಅವರಿಗೆ, “ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ” ಎಂದು ಹೇಳಿದಾಗ, ಅವರು ತಂದುಕೊಟ್ಟರು.
ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.
ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.
ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,
ನಿನ್ನ ಎಲ್ಲಾ ಉಪದೇಶಾಜ್ಞೆಗಳನ್ನು, ನನ್ನ ತುಟಿಗಳು ವರ್ಣಿಸುತ್ತವೆ.
ಶಿಷ್ಟರ ಭಾಷಣ ಬಹುಜನ ಪೋಷಣ, ಬುದ್ಧಿಯ ಕೊರತೆ ಮೂರ್ಖರ ನಾಶನ.
ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
ಮೂಢನ ಮೂರ್ಖತನಕ್ಕೆ ಸರಿಯಾಗಿ ಉತ್ತರ ಕೊಡಬೇಡ, ನೀನೂ ಅವನಿಗೆ ಸಮಾನನಾದೀಯೆ.
ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
‹ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?›‹ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.›
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.