ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು.
TSK
TSK · ದಾನಿಯೇಲನು 1:2
Treasury of Scripture Knowledge references in ಕನ್ನಡ IRV.
ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
¶ ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.
ಸೌಲನ ತಲೆಯನ್ನು ಕಡಿದು ಅವನ ಆಯುಧಗಳನ್ನು ತೆಗೆದುಕೊಂಡನು. ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿ, ತಮ್ಮ ಎಲ್ಲ ಜನರಿಗೂ ದೇವಸ್ಥಾನಗಳಿಗೂ ಜಯವಾರ್ತೆಯನ್ನು ಮುಟ್ಟಿಸಿದರು.
ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;
ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ
ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ, ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹಪ್ರವಾಹವಾಗಿ ಬಾಬಿಲೋನಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಮೇಲೆ ಬರುವುದಿಲ್ಲ; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವುದು.
ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.
ತಮ್ಮ ಬಲೆಗಳಿಗೆ ಆರಾಧನೆ ಮಾಡುತ್ತಾ ಬಲಿ ಕೊಡುತ್ತಾರೆ, ತಮ್ಮ ಜಾಲಗಳ ಎದುರು ಧೂಪಹಾಕುತ್ತಾರೆ; ಅವುಗಳ ಮೂಲಕವೇ ಅವರ ಭೋಜನವು ಪುಷ್ಟಿಯಾಯಿತು, ಅವರ ಆಹಾರವು ರುಚಿ ಎಂದು ಹೇಳುತ್ತಾರೆ.