¶ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
TSK
TSK · ದಾನಿಯೇಲನು 10:1
Treasury of Scripture Knowledge references in ಕನ್ನಡ IRV.
¶ ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.
ಪರ್ಷಿಯ ರಾಜನಾದ ಕೋರೆಷನ ಕಾಲದಿಂದ ಪರ್ಷಿಯ ರಾಜನಾದ ದಾರ್ಯಾವೆಷನ ಆಳ್ವಿಕೆಯವರೆಗೂ ಇದು ಮುಂದುವರಿಯಿತು.
¶ ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.
ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.
¶ ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.
ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.
¶ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.
ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.
¶ ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.
ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.
ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.