ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು
TSK
TSK · ದಾನಿಯೇಲನು 11:35
Treasury of Scripture Knowledge references in ಕನ್ನಡ IRV.
ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.
ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”
ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣ ದಿಕ್ಕಿನ ದೇಶದ ಮೇಲೆ ನುಗ್ಗುವನು. ಆದರೆ ಮೊದಲು ಆದಂತೆಯೇ ಎರಡನೆಯ ಸಲ ಆಗದು.
¶ “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.
“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
¶ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
‹ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು”› ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›
¶ ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
‹ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,›‹ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು›‹ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.›‹ನೀನು ಸಾಯುವ ತನಕ›‹ನಂಬಿಗಸ್ತನಾಗಿರು, ನಾನು ನಿನಗೆ›‹ಜೀವದ ಕಿರೀಟವನ್ನು ಕೊಡುವೆನು.›
ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.