ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
TSK
TSK · ದಾನಿಯೇಲನು 11:36
Treasury of Scripture Knowledge references in ಕನ್ನಡ IRV.
ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.
ದೇವಾಧಿದೇವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಆತನ ಪ್ರೀತಿಯು ಶಾಶ್ವತವಾದದ್ದು.
ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
ಇನ್ನು ಸ್ವಲ್ಪ ಕಾಲದೊಳಗೆ ನಿಮ್ಮ ಮೇಲಿನ ಉಗ್ರವು ತೀರಿ, ನನ್ನ ಕೋಪವು ಅವರ ನಾಶನಕ್ಕಾಗುವುದು.”
ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!
ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.
ನಿನ್ನವರು ಬಾಯಿ ತೆರೆದು, ನನ್ನ ವಿರುದ್ಧವಾಗಿ ಆಡಿದ ಮಾತುಗಳನ್ನು ಕೇಳಿದ್ದೇನೆ.”
ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ
ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.
ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.
ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”
ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
¶ ‹“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.›
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.