ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?
TSK
TSK · ದಾನಿಯೇಲನು 11:4
Treasury of Scripture Knowledge references in ಕನ್ನಡ IRV.
ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
ಆದರೆ ದೇವಾಲಯಕ್ಕೆ ಹೋಗಿ ಅವರ ಅಂತ್ಯಾವಸ್ಥೆಯನ್ನು ಆಲೋಚಿಸಿದಾಗ ನನಗೆ ಗೊತ್ತಾಯಿತು.
ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
ಆದರೆ ಯಾವ ಜನಾಂಗವು ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು, ಹೌದು, ಕಿತ್ತುಹಾಕಿ ನಾಶ ಮಾಡುವೆನು ಎಂಬುದು ಯೆಹೋವನ ನುಡಿ” ಎಂದು ಹೇಳುತ್ತಾನೆ.
ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.
ದಾನಿಯೇಲನು ಆ ಪ್ರಸ್ತಾಪವನ್ನೆತ್ತಿ ಇಂತೆಂದನು, “ನಾನು ರಾತ್ರಿ ಕಂಡ ಕನಸಿನಲ್ಲಿ ಆಹಾ, ಚತುರ್ದಿಕ್ಕಿನ ಗಾಳಿಗಳೂ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿದ್ದವು.
ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.
ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.
¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›