ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.
TSK
TSK · ದಾನಿಯೇಲನು 11:8
Treasury of Scripture Knowledge references in ಕನ್ನಡ IRV.
ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.
ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.
ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.
ನಾನು ಐಗುಪ್ತದ ದೇವಾಲಯಗಳಲ್ಲಿ ಬೆಂಕಿಹೊತ್ತಿಸುವೆನು, ಅವನು ಅವುಗಳನ್ನು ಸುಟ್ಟು ದೇವತೆಗಳನ್ನು ಸೆರೆ ಒಯ್ಯುವನು; ಕುರುಬನು ತನ್ನ ಕಂಬಳಿಯನ್ನು ಸುತ್ತಿಕೊಳ್ಳುವಂತೆ ಅವನು ಐಗುಪ್ತ ದೇಶವನ್ನು ಸುತ್ತಿಕೊಳ್ಳುವನು; ಸಮಾಧಾನವಾಗಿ ಅಲ್ಲಿಂದ ಹೊರಟು ಹೋಗುವನು.
ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.
ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.