ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
TSK
TSK · ದಾನಿಯೇಲನು 12:1
Treasury of Scripture Knowledge references in ಕನ್ನಡ IRV.
ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.
ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”
‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.
ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.
ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
ಪಾರಸಿಯ ರಾಜ್ಯದ ದಿವ್ಯಪಾಲಕನು ಇಪ್ಪತ್ತೊಂದು ದಿನ ನನ್ನನ್ನು ತಡೆಯಲು ಇಗೋ, ಪ್ರಧಾನ ದಿವ್ಯಪಾಲಕರಲ್ಲೊಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು; ಅಲ್ಲಿ ಪಾರಸಿಯ ರಾಜರ ಸಂಗಡ ಹೋರಾಡಿ,
ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.
ಆದರೆ ಚೀಯೋನ್ ಪರ್ವತದಲ್ಲಿ ಅನೇಕರು ಉಳಿದಿರುವರು, ಆ ಪರ್ವತವು ಪರಿಶುದ್ಧವಾಗಿರುವುದು; ಯಾಕೋಬನ ವಂಶದವರು ತಮ್ಮ ಸ್ವತ್ತುಗಳನ್ನು ಅನುಭವಿಸುವರು.
‹ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.›
‹ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ”› ಎಂದು ಹೇಳಿದನು.
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,
¶ ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
¶ ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ ಆಯಿತು” ಎಂದು ಹೇಳಿತು.
¶ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.
ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.