¶ ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
TSK
TSK · ದಾನಿಯೇಲನು 12:4
Treasury of Scripture Knowledge references in ಕನ್ನಡ IRV.
¶ ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.
ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.
ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.
¶ ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
¶ ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.