TSK

TSK · ದಾನಿಯೇಲನು 2:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.

ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.

ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ.

ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.

ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?

ಜ್ಞಾನಿಯ ಹಾಗೆ ಇರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವುದು, ಒರಟು ಮುಖವು ಬದಲಾಗುವುದು.

ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.

ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.

ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.

ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.

‹ಮರೆಯಾಗಿರುವಂಥದ್ದು ವ್ಯಕ್ತವಾಗುವುದು. ರಹಸ್ಯವಾಗಿರುವಂಥದ್ದು ಪ್ರಕಟವಾಗುವುದು.›

¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.

ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.

ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”

ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.

¶ ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.