ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.
TSK
TSK · ದಾನಿಯೇಲನು 2:34
Treasury of Scripture Knowledge references in ಕನ್ನಡ IRV.
ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.
ನಿನ್ನನ್ನು ಆರಾಧಿಸದ ಜನಾಂಗ ಮತ್ತು ರಾಜ್ಯಗಳು ನಾಶವಾಗುವವು; ಹೌದು, ಆ ಜನಾಂಗಗಳು ಹಾಳಾಗಿ ಹೋಗುವವು.
ಅವನು ಮತ್ತೆ ಸಾವಿರ ಮೊಳ ಅಳೆದನು. ಅದು ನನ್ನಿಂದ ದಾಟಲಾಗದ ನದಿಯಾಗಿತ್ತು; ನೀರು ಆಳವಾಗಿ ಈಜಾಡುವಷ್ಟು ಪ್ರವಾಹವಾಗಿತ್ತು, ದಾಟಲಾಗದ ನದಿಯಾಗಿತ್ತು.
ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.
ಯುಕ್ತಿಯಿಂದಲೇ ತನ್ನ ಮೋಸವನ್ನು ಸಿದ್ಧಿಗೆ ತಂದು, ಮನದಲ್ಲಿ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹಳ ಜನರನ್ನು ನಾಶಪಡಿಸಿ, ಪ್ರಭುಗಳ ಪ್ರಭುವಿಗೂ ವಿರುದ್ಧವಾಗಿ ಏಳುವನು. ಆಹಾ, ಯಾರ ಕೈಯೂ ಸೋಕದೆ ಹಾಳಾಗುವನು.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”
ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
¶ ಭೂಮಿಯ ಮೇಲಿರುವ ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ.
ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”
ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”