TSK

TSK · ದಾನಿಯೇಲನು 3:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ರಾಜನಾದ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೋತ್ಸವಕ್ಕೆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಮುಂತಾದವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಒಟ್ಟುಗೂಡಿಸುವಂತೆ ಸಮಾಚಾರವನ್ನು ಕಳುಹಿಸಿದನು.

‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.

ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.

ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

‹ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು”› ಎಂದು ಹೇಳಿದನು.

ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.