TSK

TSK · ದಾನಿಯೇಲನು 3:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.

ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು,

ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.

ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.

¶ ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲವೇ.

ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.

ಆದರೆ ಪೌಲನು ಆ ಸರ್ಪವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಅಪಾಯ ಉಂಟಾಗಲಿಲ್ಲ.

¶ ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?