ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
TSK
TSK · ದಾನಿಯೇಲನು 3:6
Treasury of Scripture Knowledge references in ಕನ್ನಡ IRV.
ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.
¶ ಆಗ ರಾಜನು ಪಂಡಿತರಿಗೆ ಪ್ರತ್ಯುತ್ತರವಾಗಿ, “ನನ್ನ ಮಾತು ಖಂಡಿತ; ನೀವೇ ಆ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು, ನಿಮ್ಮ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಿಬಿಡುವೆನು.
¶ “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ.
ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.
ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು.
‹ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.›
ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.