TSK

TSK · ದಾನಿಯೇಲನು 3:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಗತಿಸಿಹೋದ ಕಾಲದಲ್ಲಿ ಆತನು ಎಲ್ಲಾ ಜನಾಂಗಗಳನ್ನು ತಮ್ಮ ತಮ್ಮ ಮನಸ್ಸಿಗೆ ತೋಚಿದ ಮಾರ್ಗಗಳಲ್ಲಿ ನಡೆಯುವುದಕ್ಕೆ ಬಿಟ್ಟು ಬಿಟ್ಟನು.

ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.