ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.
TSK
TSK · ದಾನಿಯೇಲನು 3:8
Treasury of Scripture Knowledge references in ಕನ್ನಡ IRV.
ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
¶ ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.
ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.