ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.
TSK
TSK · ದಾನಿಯೇಲನು 4:17
Treasury of Scripture Knowledge references in ಕನ್ನಡ IRV.
ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.
ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.
ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
¶ ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.
ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.
ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
¶ “ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು, ನೆಮ್ಮದಿಯ ಕಾಲದಲ್ಲಿ ಬಂದು ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.
ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.