TSK

TSK · ದಾನಿಯೇಲನು 4:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು.

ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.

ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.

ದಾವೀದನೂ ಹೊರಗೆ ಬಂದು, “ಅರಸನೇ ನನ್ನ ಒಡೆಯನೇ” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ,

ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು.

¶ ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.

ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.

ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.

ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,

ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.

ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.

ಈ ಕನಸಿನ ಪ್ರಸ್ತಾಪವು ಇಲ್ಲಿಗೆ ಮುಗಿಯಿತು. ದಾನಿಯೇಲನಾದ ನಾನು ನನ್ನ ಯೋಚನೆಗಳಿಂದ ಬಹು ಕಳವಳಗೊಂಡೆ. ನನ್ನ ಮುಖವು ಕಳೆಗುಂದಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೆ.

ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.