¶ “ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.
TSK
TSK · ದಾನಿಯೇಲನು 4:27
Treasury of Scripture Knowledge references in ಕನ್ನಡ IRV.
ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.
ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,
ನಿನ್ನ ಕಟ್ಟಳೆಗಳ ವಿಷಯವಾಗಿ, ಅರಸುಗಳ ಮುಂದೆಯೂ ಮಾತನಾಡುವೆನು, ನಾಚಿಕೆಪಡುವುದಿಲ್ಲ.
ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.
ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?
ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,
ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.
ನೀವು ಲೋ ದೆಬಾರ್ ಪಟ್ಟಣದಲ್ಲಿ ಉಲ್ಲಾಸಪಡುವವರೇ, ಸ್ವಬಲದಿಂದ ಕರ್ನಾಯಿಮ್ ಪಟ್ಟಣವನ್ನು ಪಡೆದುಕೊಂಡಿಲ್ಲವೇ ಎಂದುಕೊಳ್ಳುವವರೇ.
ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.
ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.
‹ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.›
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.