TSK

TSK · ದಾನಿಯೇಲನು 4:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.

¶ ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.

ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು

ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.

ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.

ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಸರ್ವವಿಷಯಗಳಲ್ಲಿ ಅವರನ್ನು ವಿಚಾರಮಾಡಲು ಅವನ ಪೂರ್ಣ ರಾಜ್ಯದಲ್ಲಿನ ಎಲ್ಲಾ ಜೋಯಿಸರಿಗಿಂತಲೂ, ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.

¶ ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.

ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ, ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಬಳಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು,

¶ “ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.