TSK

TSK · ದಾನಿಯೇಲನು 5:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.

ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.

ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.

ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.

‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.

ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.