ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.
TSK
TSK · ದಾನಿಯೇಲನು 5:20
Treasury of Scripture Knowledge references in ಕನ್ನಡ IRV.
ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.
ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು.
ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
ಗರ್ವದಿಂದ ಭಂಗ, ಉಬ್ಬಿನಿಂದ ದೊಬ್ಬು.
ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.
“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.
¶ ಯೆಹೋವನು ಇಂತೆನ್ನುತ್ತಾನೆ, “ಐಗುಪ್ತಕ್ಕೆ ಆಧಾರವಾದವರು ಬೀಳುವರು, ಅದರ ಶಕ್ತಿಯ ಅಹಂಕಾರವು ಇಳಿದು ಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು” ಇದು ಕರ್ತನಾದ ಯೆಹೋವನ ನುಡಿ.
ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.
ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.