ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು.
TSK
TSK · ದಾನಿಯೇಲನು 5:21
Treasury of Scripture Knowledge references in ಕನ್ನಡ IRV.
ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರಗೊಳಿಸಿ, ಹಸುರಾದದ್ದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವವು. ಇದನ್ನು ಯೆಹೋವನಾದ ನಾನೇ ನುಡಿದು ನಡೆಸಿದ್ದೇನೆ.”
ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.
ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.