TSK

TSK · ದಾನಿಯೇಲನು 5:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.

¶ ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.

ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,

ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.

ಆತನೇ ನನ್ನ ನಡತೆಯನ್ನು ನೋಡಿ ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಿದ್ದಾನೆ ಎಂದುಕೊಳ್ಳುತ್ತಿದ್ದೆನು.

ನೀನು ವಿಮುಖನಾಗಲು ತಲ್ಲಣಿಸುತ್ತವೆ; ಅವುಗಳ ಶ್ವಾಸವನ್ನು ತೆಗೆದುಬಿಡಲು ಅವು ಸತ್ತು ತಿರುಗಿ ಮಣ್ಣಿಗೆ ಸೇರುತ್ತವೆ.

ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.

ನಾನು ನಡೆಯುವುದನ್ನು, ಮಲಗುವುದನ್ನು ಶೋಧಿಸಿ ಗ್ರಹಿಸಿಕೊಳ್ಳುತ್ತಿ, ನನ್ನ ನಡತೆಯೆಲ್ಲಾ ನಿನಗೆ ಗೋಚರವಾಗಿದೆ.

ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?

ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.

ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’

ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.

ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.

“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

¶ “‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.

ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.

ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.

ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.

ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.

¶ ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.