ಯೆಶಾಯ 21:4
TSK
ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.
TSK
Treasury of Scripture Knowledge references in ಕನ್ನಡ IRV.
ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ನಡುಕವು ನನ್ನನ್ನು ಆವರಿಸಿಕೊಂಡಿದೆ, ನಾನು ಅಪೇಕ್ಷಿಸುತ್ತಿದ್ದ ರಾತ್ರಿಯು ನನಗೆ ಭಯವಾಗಿ ಪರಿಣಮಿಸಿದೆ.
ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.
¶ ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.