¶ ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ.
TSK
TSK · ದಾನಿಯೇಲನು 5:7
Treasury of Scripture Knowledge references in ಕನ್ನಡ IRV.
¶ ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.
¶ ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.
ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,
ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.
ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.
ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.