TSK

TSK · ದಾನಿಯೇಲನು 6:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,

‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,

ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,

ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:

ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.

ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.

¶ ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.

‹ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.›

¶ ‹“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.›

¶ ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,

ನೀವು ಭಾವಿಸಿದಂತೆ ಇವರು ಮದ್ಯಪಾನಮಾಡಿ ಅಮಲೇರಿದವರಲ್ಲ, ಈಗ ಬೆಳಗ್ಗೆ ಒಂಭತ್ತು ಘಂಟೆಯಾಗಿದೆಯಷ್ಟೆ.

ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”

“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.

¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.

ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.

ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ಆ ದಿನಗಳನ್ನು ಮುಗಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ತಮ್ಮ ಮಡದಿ ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಬೀಳ್ಕೊಟ್ಟರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆ ಮಾಡಿ,

ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

‹ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.›‹ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.›