ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು.
TSK
TSK · ದಾನಿಯೇಲನು 6:23
Treasury of Scripture Knowledge references in ಕನ್ನಡ IRV.
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
¶ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.
ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.
ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.
ಯೇಸು ಅವನಿಗೆ, ‹“‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!”› ಎಂದು ಹೇಳಿದನು.