TSK

TSK · ದಾನಿಯೇಲನು 6:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?

ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.

¶ “ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,

ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.

ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ.

ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.

ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.

ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು.

ಸಕಲ ಜನಾಂಗ, ಕುಲ, ಭಾಷೆಗಳವರಲ್ಲಿ ಯಾರಾದರೂ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ದೇವರ ವಿಷಯದಲ್ಲಿ ಅಲ್ಲ ಸಲ್ಲದ ಮಾತುಗಳನ್ನಾಡಿದರೆ ಅವರನ್ನು ತುಂಡುತುಂಡಾಗಿ ಕತ್ತರಿಸಿ, ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ಯಾವ ದೇವರೂ ಇಲ್ಲವಲ್ಲಾ” ಎಂದು ಹೇಳಿದನು.

¶ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.

ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.

ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.

‹ನಮ್ಮನ್ನು ಶೋಧನೆಯೊಳಗೆ ಸೇರಿಸದೆ› ‹ಕೆಡುಕನಿಂದ; ನಮ್ಮನ್ನು ತಪ್ಪಿಸು›

‹ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.›

ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’” ಎಂಬುದೇ.

ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.

ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.

ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.