ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.
TSK
TSK · ದಾನಿಯೇಲನು 6:4
Treasury of Scripture Knowledge references in ಕನ್ನಡ IRV.
ಫಿಲಿಷ್ಟಿಯರ ಕೇಡಿಗೆ ಕಾರಣ ಹುಡುಕುತ್ತಿದ್ದ ಯೆಹೋವನ ಪ್ರೇರಣೆಯಿಂದಲೇ ಈ ಸಂಗತಿ ಉಂಟಾಯಿತೆಂಬುದು ಅವನ ತಂದೆತಾಯಿಗಳಿಗೆ ಗೊತ್ತಿರಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.
ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.
ಅವನು, “ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಆಲೋಚಕರಲ್ಲೊಬ್ಬನು, ನಿನ್ನ ಮನೆಯಲ್ಲಿ ಗೌರವಸ್ಥನೂ ಆಗಿದ್ದನಲ್ಲವೇ?
ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.
¶ ಹೀಗಿರಲು ಆ ಸಮಯದಲ್ಲಿ ಕೆಲವು ಮಂದಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸುವುದಕ್ಕೆ ರಾಜನ ಸನ್ನಿಧಿಗೆ ಬಂದು
ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.
ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.