ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
TSK
TSK · ದಾನಿಯೇಲನು 6:7
Treasury of Scripture Knowledge references in ಕನ್ನಡ IRV.
ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!
ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ
ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.
ಆಗ ಆ ಪಂಡಿತರು ಅರಮಾಯ ಭಾಷೆಯಲ್ಲಿ ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು; ಆ ಕನಸನ್ನು ನಿನ್ನ ದಾಸರಿಗೆ ಹೇಳು; ಅದರ ತಾತ್ಪರ್ಯವನ್ನು ತಿಳಿಸುವೆವು” ಎಂದು ಅರಿಕೆಮಾಡಿದರು.
ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.
ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.
ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು.
ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?