TSK

TSK · ದಾನಿಯೇಲನು 7:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.

ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.

¶ ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.

¶ ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.

ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”