TSK

TSK · ದಾನಿಯೇಲನು 7:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.

ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ

ಇದಲ್ಲದೆ ಆ ಗಣದ ಅಧಿಪತಿಯನ್ನೂ ಎದುರಿಸುವಷ್ಟು ಉಬ್ಬಿಕೊಂಡು ನಿತ್ಯಹೋಮವನ್ನು ಆತನಿಗೆ ಸಲ್ಲದಂತೆ ಮಾಡಿತು.

ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹು ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧಭಾಗ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.”

ಅವನ ವಿರುದ್ಧವಾಗಿ ಕಿತ್ತೀಮಿನ ಹಡಗುಗಳು ಬರಲು, ಅವನು ಎದೆಗುಂದಿ ಹಿಂದಿರುಗಿ ಪರಿಶುದ್ಧ ನಿಬಂಧನೆಯ ಮೇಲೆ ಮತ್ಸರಗೊಂಡು ತನಗೆ ಇಷ್ಟ ಬಂದಂತೆ ಮಾಡುವನು. ಅವನು ಸ್ವದೇಶಕ್ಕೆ ಸೇರಿ ಪರಿಶುದ್ಧ ನಿಬಂಧನೆಯನ್ನು ತೊರೆದವರನ್ನು ಕಟಾಕ್ಷಿಸುವನು.

ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.

ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.

¶ ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.

¶ ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.

ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.

ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.

ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.

¶ “ಪ್ರವಾದಿಗಳ, ದೇವಜನರ ರಕ್ತವು ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವೂ ಅವಳಲ್ಲಿಯೇ ಸಿಕ್ಕಿತಲ್ಲಾ” ಎಂದು ಹೇಳಿದನು.