TSK

TSK · ದಾನಿಯೇಲನು 8:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.

ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು

ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.

ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.

ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”

ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.

ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.

ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.

ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.

ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.

‹ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.›

ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.

ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”