¶ ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.
TSK
TSK · ದಾನಿಯೇಲನು 8:17
Treasury of Scripture Knowledge references in ಕನ್ನಡ IRV.
“ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.
¶ ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.
ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು ದೇವರಿಗೆ ಅತಿಪ್ರಿಯನು. ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.
ದಾನಿಯೇಲನಾದ ನಾನೊಬ್ಬನೇ ಆ ದರ್ಶನವನ್ನು ಕಂಡೆನು; ನನ್ನೊಂದಿಗಿದ್ದವರು ಅದನ್ನು ಕಾಣಲಿಲ್ಲ; ದೊಡ್ಡ ನಡುಕವು ಅವರನ್ನು ಹಿಡಿಯಿತು, ಓಡಿ ಹೋಗಿ ಅವಿತುಕೊಂಡರು.
ಇಗೋ, ನರರೂಪ ಸದೃಶನೊಬ್ಬನು ನನ್ನ ತುಟಿಗಳನ್ನು ಮುಟ್ಟಲು ನಾನು ಬಾಯಿಬಿಟ್ಟು ನನ್ನ ಮುಂದೆ ನಿಂತಿರುವವನಿಗೆ, “ಎನ್ನೊಡೆಯನೇ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಿತ್ರಾಣನಾಗಿದ್ದೇನೆ.
ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.
ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆ ಹಾಕು. ಅಂತ್ಯಕಾಲದ ವರೆಗೆ ಮರೆಯಾಗಿರಲಿ. ಬಹಳ ಜನರು ಅತ್ತಿತ್ತ ತಿರುಗುವರು, ತಿಳಿವಳಿಕೆಯು ಹೆಚ್ಚುವುದು.”
ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.
ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.