TSK

TSK · ದಾನಿಯೇಲನು 8:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ರಾಜ್ಯಗಳ ಕಡೆಯ ಕಾಲದಲ್ಲಿ, ಅಧರ್ಮಿಗಳ ಅಧರ್ಮವು ಪೂರ್ತಿಯಾದಾಗ ಕಠಿಣಮುಖನೂ, ತಂತ್ರವುಳ್ಳವನೂ ಆದ ಒಬ್ಬ ರಾಜನು ತಲೆದೋರುವನು.

ಆ ಇಬ್ಬರು ರಾಜರು ಒಬ್ಬರಿಗೊಬ್ಬರು ಕೇಡಿನ ಮನಸುಳ್ಳವರಾಗಿ ಸಹ ಪಂಕ್ತಿಯಲ್ಲಿ ಸುಳ್ಳುಸುಳ್ಳು ಮಾತನಾಡಿಕೊಳ್ಳುವರು. ಆದರೆ ಏನೂ ಸಾಗದು, ಪರಿಣಾಮವು ನಿಶ್ಚಿತ ಕಾಲದಲ್ಲೇ ತಲೆದೋರುವುದು.

¶ “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.

ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.

¶ ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.

ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.

ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.