ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.
TSK
TSK · ದಾನಿಯೇಲನು 8:23
Treasury of Scripture Knowledge references in ಕನ್ನಡ IRV.
ಬಹಳ ದಿನಗಳಾದ ಮೇಲೆ ನಾನು ನಿನ್ನನ್ನು ಕರೆಯುತ್ತೇನೆ; ಕೆಲವು ವರ್ಷಗಳ ನಂತರ ಖಡ್ಗದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಜನಾಂಗಗಳೊಳಗಿಂದ ಕೂಡಿಸಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೆ ನೀನು ಬರುವಿ.
ನಾನು ಆ ಕೊಂಬುಗಳನ್ನು ನೋಡುತ್ತಿರುವಾಗಲೆ ಇಗೋ, ಅವುಗಳ ನಡುವೆ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು; ಅದಕ್ಕೆ ಎಡೆಮಾಡಿ ಕೊಡಲು ಮೊದಲಿನ ಕೊಂಬುಗಳಲ್ಲಿ ಮೂರು ಬೇರು ಸಹಿತ ಕೀಳಲ್ಪಟ್ಟವು. ಆಹಾ, ಈ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳೂ, ಬಡಾಯಿ ಕೊಚ್ಚಿಕೊಳ್ಳುವ ಬಾಯಿಯೂ ಇದ್ದವು.
ಈ ನಾಲ್ಕನೆಯ ಮೃಗದ ವಿಷಯವಾಗಿಯೂ, ಅದರ ತಲೆಯ ಮೇಲಣ ಹತ್ತು ಕೊಂಬುಗಳ ವಿಷಯವಾಗಿಯೂ
ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.
ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.
ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ನುಗ್ಗುವನು. ತಂದೆ, ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು, ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.
ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.
¶ ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.