TSK

TSK · ದಾನಿಯೇಲನು 8:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?

ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.

ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,

¶ ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.

ಈ ಮಹತ್ವದ ನಿಮಿತ್ತ ಸಕಲ ಜನಾಂಗ, ಕುಲ, ಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ತನಗೆ ಬೇಕಾದವರನ್ನು ಕೊಲ್ಲಿಸಿದನು, ತನಗೆ ಬೇಕಾದವರನ್ನು ಉಳಿಸಿದನು, ಮನಸ್ಸು ಬಂದವರನ್ನು ಅಭಿವೃದ್ಧಿಮಾಡಿದನು, ಮನಸ್ಸು ಬಂದವರನ್ನು ಇಳಿಸಿದನು.

ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.

¶ ನಾನು ಈಗ ಸತ್ಯಾಂಶವನ್ನು ನಿನಗೆ ತಿಳಿಸುವೆನು, “ಇಗೋ, ಪಾರಸಿಯ ದೇಶದಲ್ಲಿ ಇನ್ನು ಮೂವರು ರಾಜರು ಏಳುವರು; ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು; ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧವಾಗಿ ತನ್ನ ಬಲವನ್ನೆಲ್ಲಾ ಎಬ್ಬಿಸುವನು.

¶ “ರಾಜನು ತನ್ನ ಇಚ್ಛಾನುಸಾರ ನಡೆದು ತಾನು ಎಲ್ಲಾ ದೇವರುಗಳಿಗಿಂತ ದೊಡ್ಡವನೆಂದು ತನ್ನನ್ನು ಹೆಚ್ಚಿಸಿಕೊಂಡು ಗರ್ವದಿಂದ ಉಬ್ಬಿ, ದೇವಾಧಿ ದೇವನನ್ನು ಮಿತಿಮೀರಿ ದೂಷಿಸಿ ನಿಮ್ಮ ಮೇಲಿನ ದೈವ ಕೋಪವು ತೀರುವ ತನಕ ವೃದ್ಧಿಯಾಗಿರುವನು. ದೈವಸಂಕಲ್ಪವು ನೆರವೇರಲೇ ಬೇಕು.