¶ “ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ,
TSK
TSK · ದಾನಿಯೇಲನು 9:13
Treasury of Scripture Knowledge references in ಕನ್ನಡ IRV.
ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು ಮತ್ತು ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ.
ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.
ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.
ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”
ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.
ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ, ನಿಬಂಧನೆಗಳನ್ನೂ, ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪ ಮಾಡಿ ಅನ್ಯದೇವತೆಗಳಿಗೆ ಧೂಪಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ” ಎಂದನು.
ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.
¶ “ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.
ಎಲ್ಲರೂ ಒಲೆಯಂತೆ ಝಳವೇರಿ ತಮ್ಮ ನ್ಯಾಯಾಧೀಶ್ವರರನ್ನು ನುಂಗಿಬಿಡುತ್ತಾರೆ; ಅವರ ಸಕಲ ರಾಜರು ಬಿದ್ದಿರುತ್ತಾರೆ, ಅವರೊಳಗೆ ನನ್ನನ್ನು ಪ್ರಾರ್ಥಿಸುವವರೇ ಇಲ್ಲ.
ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.
‹‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.›
‹ಧರ್ಮಶಾಸ್ತ್ರವು ನಿರರ್ಥಕವೇನೂ ಅಲ್ಲ. ದೇವರ ವಾಕ್ಯವನ್ನು ಹೊಂದಿರುವವರಿಗೆ ‘ದೇವರುಗಳೆಂದೂ,’ ಆತನು ಕರೆದಿರುವುದಾದರೆ›
ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.